ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿ ಪ್ರಕಟ




ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿಗೆ ಈ ಬಾರಿ ಹಿರಿಯ ಪತ್ರಕರ್ತೆ, ‘ತರಂಗ’ದ ಸಂಪಾದಕಿ ಡಾ. ಯು.ಬಿ. ರಾಜಲಕ್ಷ್ಮಿ ಅವರನ್ನು ಆಯ್ಕೆ ಮಾಡಲಾಗಿದೆ.

ಡಾ. ಯು.ಬಿ. ರಾಜಲಕ್ಷ್ಮಿ ಕಳೆದ 37 ವರ್ಷಗಳಿಂದ ಪತ್ರಿಕಾರಂಗದಲ್ಲಿದ್ದಾರೆ. ಉಡುಪಿಯ ಜಿಲ್ಲೆಯ ಕಾರ್ಕಳದವರಾದ ಇವರು ಹೊಸ ದಿಗಂತ, ಮುಂಗಾರು, ಟೈಮ್ಸ್ ಆಫ್ ಡೆಕ್ಕನ್ ದಿನಪತ್ರಿಕೆಗಳಲ್ಲಿ ಕೆಲಸಮಾಡಿ 1987 ರಲ್ಲಿ ತರಂಗ ವಾರಪತ್ರಿಕೆಯಲ್ಲಿ ಸೇವೆ ಆರಂಭಿಸಿ ಈಗ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಪ್ರಶಸ್ತಿ 15 ಸಾವಿರ ರೂ. ನಗದು ಹಾಗೂ ಫಲಕ ಹೊಂದಿದೆ.

ಕಾಮೆಂಟ್‌ಗಳು

ಪ್ರಚಲಿತ ಪೋಸ್ಟ್‌ಗಳು