ಛಂದ ಪುಸ್ತಕದಿಂದ ಹಸ್ತಪ್ರತಿ ಆಹ್ವಾನ


ಛಂದ ಪುಸ್ತಕ ಪ್ರಕಾಶನವು 2020ನೇ ಸಾಲಿನ ‘ಛಂದ ಪುಸ್ತಕ’ ಬಹುಮಾನಕ್ಕಾಗಿ ಹಸ್ತಪ್ರತಿಗಳನ್ನು ಆಹ್ವಾನಿದೆ. ಇದುವರೆಗೂ ಒಂದೂ ಕಥಾಸಂಕಲನ ಹೊರತಂದಿರದ ಲೇಖಕರಿಗೆ ಮಾತ್ರ ಅವಕಾಶ. ಸಾಹಿತ್ಯದ ಇತರ ಪ್ರಕಾರಗಳಲ್ಲಿ ಒಂದೆರಡು ಪುಸ್ತಕಗಳು ಪ್ರಕಟವಾಗಿದ್ದರೆ ಪರವಾಯಿಲ್ಲ. ತಮಗೆ ಉತ್ತಮವೆನಿಸಿದ ಸುಮಾರು 8 ಕತೆಗಳನ್ನು ಕಂಪ್ಯೂಟರ್‌ನಲ್ಲಿ ಟೈಪ್ ಮಾಡಿ, ಮುದ್ರಿತ ಹಸ್ತಪ್ರತಿಯನ್ನು ಕೊರಿಯರ್ ಮೂಲಕ ಕಳುಹಿಸಬೇಕು. ಇ-ಮೇಲ್ ಮುಖಾಂತರ ಕತೆಗಳನ್ನು ಸ್ವೀಕರಿಸಲಾಗುವುದಿಲ್ಲ.

ಆಯ್ಕೆಯಾದ ಕತೆಗಾರರಿಗೆ ಮೂವತ್ತು ಸಾವಿರ ರೂಪಾಯಿ ಬಹುಮಾನ ಕೊಟ್ಟು, ಅವರ ಕಥಾಸಂಕಲನವನ್ನು ಛಂದ ಪುಸ್ತಕ ಪ್ರಕಟಿಸುತ್ತದೆ. ಕೊರೊನಾ ಪರಿಸ್ಥಿತಿ ಸುಧಾರಿಸಿದರೆ ಸುಂದರವಾದ ಪುಸ್ತಕ ಬಿಡುಗಡೆ ಸಮಾರಂಭವನ್ನೂ ಮಾಡಲಾಗುವುದು. ಹಸ್ತಪ್ರತಿಯನ್ನು ಯಾವುದೇ ಕಾರಣಕ್ಕೂ ಹಿಂತಿರುಗಿಸಲಾಗುವುದಿಲ್ಲ. ಪುಸ್ತಕದ ಆಯ್ಕೆ ಮತ್ತು ಪ್ರಕಟಣೆಯಲ್ಲಿ ಪ್ರಕಾಶಕರದೇ ಅಂತಿಮ ನಿರ್ಧಾರ.

ಹಸ್ತಪ್ರತಿ ಕಳುಹಿಸಲು ಕೊನೆಯ ದಿನಾಂಕ: ಜುಲೈ 15, 2020

ಕತೆಗಳನ್ನು ಕಳಿಸಬೇಕಾದ ವಿಳಾಸ:

ಛಂದ ಪುಸ್ತಕ, C/O ವಸುಧೇಂದ್ರ, ಐ-004,

ಮಂತ್ರಿ ಪ್ಯಾರಡೈಸ್,

ಬನ್ನೇರುಘಟ್ಟ ರಸ್ತೆ,

ಬೆಂಗಳೂರು–560076

ಸಂಪರ್ಕ ಸಂಖ್ಯೆ: 98444 22782

ಹೆಚ್ಚಿನ ವಿವರಗಳಿಗೆ: vas123u@rocketmail.com

ಕಾಮೆಂಟ್‌ಗಳು

ಪ್ರಚಲಿತ ಪೋಸ್ಟ್‌ಗಳು